12:30 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ

27/05/2021, 07:43

ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಐಎಂಎ ಪ್ರಧಾನಿ 

ನರೇಂದ್ರ ಮೋದಿ ಅವರಿಗೆ ಐಎಂಎ ಪತ್ರ ಬರೆದಿದೆ.

ಅಲೋಪಥಿ ಔಷಧಗಳನ್ನು ಪಡೆಯುತ್ತಿರುವ ಲಕ್ಷಾಂತರ ಜನರು ಮೃತಪಡುತ್ತಿದ್ದಾರೆ. ಕೋವಿಡ್ ಲಸಿಕೆ ಪಡೆದ 10,000 ವೈದ್ಯರು ಸಾವನ್ನಪ್ಪಿದ್ದಾರೆ ಎಂದು  ಬಾಬಾ ರಾಮ್ ದೇವ್ ಹೇಳಿಕೆ ನೀಡಿದ್ದರು. ಅಲೋಪಥಿ ವೈದ್ಯಕೀಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ಕ್ಷಮೆಯಾಚಿಸಬೇಕು ಹಾಗೂ 1,000 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಪಾವತಿಸಬೇಕು ಎಂದು ಐಎಂಎ ಉತ್ತರಾಖಂಡ ಘಟಕ ನೋಟಇಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಐಎಂಎ, ಕೋವಿಡ್ ಲಸಿಕೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಾಬಾ ರಾಮ್ ದೇವ್ ವಿರುದ್ಧ ಕೇಸ್ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು