3:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ 

11/10/2021, 11:04

ಬಂಟ್ವಾಳ(reporterkarnataka.com):

ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. 

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು.

ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು