7:38 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ 

11/10/2021, 11:04

ಬಂಟ್ವಾಳ(reporterkarnataka.com):

ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. 

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು.

ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು