5:59 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ 

11/10/2021, 11:04

ಬಂಟ್ವಾಳ(reporterkarnataka.com):

ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. 

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು.

ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು