6:39 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಶಿರ್ವ: ಮೀನು ಹಿಡಿಯುವಾಗ ಅಕಸ್ಮಾತ್ ಕಾಲು ಜಾರಿ ನೀರು ಪಾಲಾಗಿದ್ದ ದೈವ ನರ್ತಕನ ಶವ ಪತ್ತೆ

11/10/2021, 18:19

ಶಿರ್ವ(reporterkarnataka.com): ಇಲ್ಲಿನ ನಡಿಬೆಟ್ಟು ಅಣೆಕಟ್ಟು ಬಳಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಜಾರಿಬಿದ್ದು ನೀರು ಪಾಲಾದ ದೈವ ನರ್ತಕ, ಶಿರ್ವ ಮಟ್ಟಾರು  ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಅಣೆಕಟ್ಟು ಬಳಿ ಪತ್ತೆಯಾಗಿದೆ.

ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ನೇತೃತ್ವದಲ್ಲಿ ಸತೀಶ್ ಮತ್ತು ಸಿಬ್ಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ಭಾನುವಾರ ರಾತ್ರಿ ಬೆಳಕಿನ ಅಡಚಣೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ   ತನಿಖೆ ನಡೆಸುತ್ತಿದ್ದಾರೆ.

ಅಗ್ನಿಶಾಮಕದಳದ ಶಂಕರ್, ಉಮೇಶ್, ವಿನಾಯಕ, ಚಂದ್ರಶೇಖರ, ಸುಜೇಶ್ ಮತ್ತು ಆದರ್ಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ದಿಲೀಪ್ ಚಿಕ್ಕ ವಯಸ್ಸಿನಲ್ಲೇ ಕರಾವಳಿಯಾದ್ಯಂತ ದೈವಸ್ಥಾನಗಳಲ್ಲಿ ದೈವ ನರ್ತಕರಾಗಿ, ಸೇವಕರಾಗಿ ಹೆಸರು ಮಾಡಿದ್ದರು. ಬಬ್ಬುಸ್ವಾಮಿ ದೈವದ ನರ್ತಕರಾಗಿ ಹೆಚ್ಚು ಪ್ರಸಿದ್ದಿ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು