12:04 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಶಿರ್ವ: ಮೀನು ಹಿಡಿಯುವಾಗ ಅಕಸ್ಮಾತ್ ಕಾಲು ಜಾರಿ ನೀರು ಪಾಲಾಗಿದ್ದ ದೈವ ನರ್ತಕನ ಶವ ಪತ್ತೆ

11/10/2021, 18:19

ಶಿರ್ವ(reporterkarnataka.com): ಇಲ್ಲಿನ ನಡಿಬೆಟ್ಟು ಅಣೆಕಟ್ಟು ಬಳಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಜಾರಿಬಿದ್ದು ನೀರು ಪಾಲಾದ ದೈವ ನರ್ತಕ, ಶಿರ್ವ ಮಟ್ಟಾರು  ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಅಣೆಕಟ್ಟು ಬಳಿ ಪತ್ತೆಯಾಗಿದೆ.

ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ನೇತೃತ್ವದಲ್ಲಿ ಸತೀಶ್ ಮತ್ತು ಸಿಬ್ಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ಭಾನುವಾರ ರಾತ್ರಿ ಬೆಳಕಿನ ಅಡಚಣೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ   ತನಿಖೆ ನಡೆಸುತ್ತಿದ್ದಾರೆ.

ಅಗ್ನಿಶಾಮಕದಳದ ಶಂಕರ್, ಉಮೇಶ್, ವಿನಾಯಕ, ಚಂದ್ರಶೇಖರ, ಸುಜೇಶ್ ಮತ್ತು ಆದರ್ಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ದಿಲೀಪ್ ಚಿಕ್ಕ ವಯಸ್ಸಿನಲ್ಲೇ ಕರಾವಳಿಯಾದ್ಯಂತ ದೈವಸ್ಥಾನಗಳಲ್ಲಿ ದೈವ ನರ್ತಕರಾಗಿ, ಸೇವಕರಾಗಿ ಹೆಸರು ಮಾಡಿದ್ದರು. ಬಬ್ಬುಸ್ವಾಮಿ ದೈವದ ನರ್ತಕರಾಗಿ ಹೆಚ್ಚು ಪ್ರಸಿದ್ದಿ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು