5:45 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು