6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು