7:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು