10:42 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು