1:53 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

‘ವಾಯ್ಸ್ ಆಫ್ ಆರಾಧನಾ’:  ಸೆಪ್ಟೆಂಬರ್  ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಿದ್ಧಾರ್ಥ ಶೆಟ್ಟಿ ಹಾಗೂ ನೇಹಾ ಆರ್. ಆಯ್ಕೆ

11/10/2021, 22:25

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್  ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಿದ್ಧಾರ್ಥ ಶೆಟ್ಟಿ ಬಿ.ಎಸ್.ಹಾಗೂ ನೇಹಾ ಆರ್. ಆಯ್ಕೆಗೊಂಡಿದ್ದಾರೆ.

ಸಿದ್ಧಾರ್ಥ್ ಶೆಟ್ಟಿ ಬಿ.ಎಸ್. ವಯಸ್ಸು ಬರೇ 7 ವರ್ಷ. ವಿದ್ಯಾ ವಿಕಾಸ್ ಪಬ್ಲಿಕ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಈತ.

ತಂದೆ ಸಂಜು ಬಿ., ತಾಯಿ ರಂಜಿತಾ. ಸಿದ್ಧಾರ್ಥ್ ಗೆ ನೃತ್ಯ, ಅಭಿನಯ, ಕ್ರೀಡೆಯಲ್ಲಿ ಭಾರಿ ಆಸಕ್ತಿ.ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಈತ ಹಲವು ಬಹುಮಾನ ಗಳಿಸಿದ್ದಾನೆ. 

ಸಿದ್ಧಾರ್ಥ್ ಹುಟ್ಟಿದ್ದು ಮೈಸೂರಿನಲ್ಲಿ. ತಂದೆಯ ಹುಟ್ಟೂರು ಬೇಲೂರು. 4ರ ಹರೆಯದಲ್ಲಿ ಸಿದ್ದಾರ್ಥ್  ಡಾನ್ಸ್ ಕಲಿಯಲಾರಂಭಿಸಿದ. ನರ್ಸರಿ, LKG, UKGಯನ್ನು ಬೇಲೂರಿನ learning tree ಎಂಬ ಶಾಲೆಯಲ್ಲಿ ಪೂರೈಸಿದ. ಈಗ ವಿದ್ಯಾ ವಿಕಾಸ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದಾನೆ.

ಸಿದ್ದಾರ್ಥ್  ತಂದೆ 11ತಿಂಗಳ ಹಿಂದೆ ರಸ್ತೆ ಅಪಘಾತ ದಲ್ಲಿ ಮೃತಪಟ್ಟರು. ಅವರ ಆಸೆ ಮಗನನ್ನು ದೊಡ್ಡ ಡಾನ್ಸರ್ ಮಾಡಬೇಕು ಎಂಬುದಾಗಿತ್ತು. ಅವರ ಆಸೆ ಈಡೇರಿಸಲು ತಾಯಿ ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಒಂದು ದೊಡ್ದ ವೇದಿಕೆಗೋಸ್ಕರ ಕಾಯುತ್ತಿದ್ದಾರೆ. ಝೀ ಕನ್ನಡದ ಆಡಿಷನ್ ನಲ್ಲಿ ಕೂಡ ಭಾಗವಹಿಸಿದ್ದರು.  

12ರ ಹರೆಯದ ಬೆಂಗಳೂರಿನ ನೇಹಾ ಆರ್.ವಿಜಯನಗರದ ನ್ಯೂ ಕೇಂಬ್ರಿಡ್ಜ್ ಇಂಗ್ಲಿಷ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾಳೆ. ರಂಗನಾಥ ಡಿ.ಎಲ್. ಹಾಗೂ ಸುಜಾತಾ ಸಿ. ದಂಪತಿಯ ಪುತ್ರಿಯಾದ ನೇಹಾ ಉದಯ ಟಿವಿಯ ಚಿಣ್ಣರ ಚಿಲಿಪಿಲಿ ಹಾಗೂ ಸುವರ್ಣ ಟಿವಿಯಲ್ಲಿ ತರ್ಲೆ ನನ್ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ. ಬೆಂಗಳೂರು ವಿವಿ ಆಯೋಜಿಸಿದ ರಂಗ ಶಿಬಿರದಲ್ಲಿ ಎರಡು ನಾಟಕದಲ್ಲಿ ಪಾತ್ರ ನಿರ್ವಹಿಸಿದ್ದಾಳೆ.  ಸಂಚಾರಿ ಥಿಯೇಟರ್ ಆಯೋಜಿಸಿದ ರಂಗ ಶಿಬಿರದಲ್ಲಿ ಅಪರಾಧಿಯ ಕಥೆ ಎಂಬ ನಾಟಕದಲ್ಲಿ ಪಾತ್ರ ನಿರ್ವಹಿಸಿದ್ದಾಳೆ. ಜ್ಹೀ ಕನ್ನಡದ ಕಾಮಿಡಿ ಕಿಲಾಡಿಯಲ್ಲಿಯೂ ಪಾಲ್ಗೊಂಡಿದ್ದಾಳೆ.

ಫ್ಯಾಶನ್ ಶೋ, ಎರಡು ಆ್ಯಡ್ ಶೂಟ್ ನಲ್ಲಿ ಮಾಡೆಲ್ ಆಗಿ ಭಾಗವಹಿಸಿದ್ದಾಳೆ. ಇಷ್ಟೇ ಅಲ್ಲದೆ ಫ್ಯಾನ್ಸಿ ಡ್ರೆಸ್, ಹ್ಯಾಂಡ್ ರೈಟಿಂಗ್, ಕಲರಿಂಗ್,ಸ್ಪೋರ್ಟ್ ಮುಂತಾದುವುಗಳಲ್ಲಿ ಹಲವು ಪ್ರಶಸ್ತಿಗಳನ್ನು ಚಾಚಿಕೊಂಡಿದ್ದಾಳೆ. ನೇಹಾ ವಿಕಾಸ್ ಅವರ ‘ಬ್ಯೂಟಿಪುಲ್ ಡೇ’ ಕಿರುಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು