11:30 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು