10:47 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ

27/05/2021, 14:58

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು.

ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ್ಯಾಳ ಗ್ರಾಮದಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರು ಜತೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಲಾದಾಗ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದೇನಿದ್ದರೂ ಕೊರೊನಾ ನಿಯಂತ್ರಣಕ್ಕೆ ಮೊದಲ ಆದ್ಯತೆ ಎಂದರು.

ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ನಡೆಸುವುದು ಸಾರ್ವಜನಿಕ ಜೀವನದಲ್ಲಿರುವವರಿಗೆ ಸಲ್ಲದು ಎಂದು ಅವರು ನುಡಿದರು.

ಯಾತ ನೀರಾವರಿಯಿಂದ ಮುಂಗಾರು ಬೆಳೆಗೆ ತುಂಬಾ ಅನುಕೂಲವಾಗಲಿದೆ. ಜೂನ್ ನಲ್ಲಿ ಆರಂಭಿಸುತ್ತಿದ್ದ ನೀರಾವರಿಗೆ ಈ ಬಾರಿ ಮೇ ತಿಂಗಳಿನಲ್ಲಿ ಚಾಲನೆ ನೀಡಲಾಗಿದೆ ಎಂದು ಮಾಧ್ಯಮ ಜತೆ ಹರ್ಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು