12:30 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ

13/10/2021, 17:58

ಮಂಗಳೂರು(reporterkarnataka.com):  ದ. ಕ.  ಜಿಲ್ಲಾ ಏಡ್ಸ್  ನಿಯಂತ್ರಣ ಇಲಾಖೆ ಹಾಗೂ  ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ  ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆಂಟ್ ಕಾಲೇಜಿನಲ್ಲಿ ಜರುಗಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಏಡ್ಸ್ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ. ಬದ್ರುದ್ದೀನ್ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯೇ ರಾಷ್ಟ್ರೀಯ ಸೇವಾ ಯೋಜನೆ ಎಂದರು.





ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಶೆಟ್ಟಿ ಮಾತನಾಡಿ, ವ್ಯಕ್ತಿತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವ ರಾ. ಸೇ. ಯೋ ಇಂದು ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದು  ಶ್ಲಾಘನೀಯ ಎಂದರು.

ಕಾಲೇಜಿನ ಕರೆಸ್ಪಾಂಡೆಂಟ್ ದೇವಾನಂದ ಪೈ, ಹಾಗೂ ಸಂಚಾಲಕ ಗಣೇಶ್ ಭಟ್, ಯೋಜನಾಧಿಕಾರಿ ರವಿ ಪ್ರಭಾ  ಉಪಸ್ಥಿತರಿದ್ದರು. 


ಏಡ್ಸ್ ನಿಯಂತ್ರಣ ಇಲಾಖೆಯ ಮೇಲ್ವಿಚಾರಕ ಮಹೇಶ್ ಹಾಗೂ ಸಿಬ್ಬಂದಿಗಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. 

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಕಾಲೇಜಿನ ಮನೀಶ್ ಬಿ. ಕೆ. , ಜಯಶ್ರೀ ಎಂ.ಸಿ.  ಪ್ರಥಮ ಬಹುಮಾನ ಪಡೆದರು. ವಿಶ್ವವಿದ್ಯಾನಿಲಯ ಕಾಲೇಜಿನ ರಾಧಿಕಾ ಹಾಗೂ ಅಕ್ಷಿತ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಬೆಟ್ಟಂಪ್ಪಾಡಿ ಸ. ಪ್ರ. ದರ್ಜೆ ಕಾಲೇಜಿನ ಸಾರ್ಥಕ್. ಟಿ ,ರಕ್ಷಿತ್.ಎ. ರೈ ಪಡೆದು ಕೊಂಡಿದ್ದಾರೆ.

ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರಾದ ಅಮೃತಾ, ಭೂಮಿಕಾ, ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು