1:59 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ

13/10/2021, 17:58

ಮಂಗಳೂರು(reporterkarnataka.com):  ದ. ಕ.  ಜಿಲ್ಲಾ ಏಡ್ಸ್  ನಿಯಂತ್ರಣ ಇಲಾಖೆ ಹಾಗೂ  ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ  ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆಂಟ್ ಕಾಲೇಜಿನಲ್ಲಿ ಜರುಗಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಏಡ್ಸ್ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ. ಬದ್ರುದ್ದೀನ್ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯೇ ರಾಷ್ಟ್ರೀಯ ಸೇವಾ ಯೋಜನೆ ಎಂದರು.





ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಶೆಟ್ಟಿ ಮಾತನಾಡಿ, ವ್ಯಕ್ತಿತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವ ರಾ. ಸೇ. ಯೋ ಇಂದು ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದು  ಶ್ಲಾಘನೀಯ ಎಂದರು.

ಕಾಲೇಜಿನ ಕರೆಸ್ಪಾಂಡೆಂಟ್ ದೇವಾನಂದ ಪೈ, ಹಾಗೂ ಸಂಚಾಲಕ ಗಣೇಶ್ ಭಟ್, ಯೋಜನಾಧಿಕಾರಿ ರವಿ ಪ್ರಭಾ  ಉಪಸ್ಥಿತರಿದ್ದರು. 


ಏಡ್ಸ್ ನಿಯಂತ್ರಣ ಇಲಾಖೆಯ ಮೇಲ್ವಿಚಾರಕ ಮಹೇಶ್ ಹಾಗೂ ಸಿಬ್ಬಂದಿಗಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. 

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಕಾಲೇಜಿನ ಮನೀಶ್ ಬಿ. ಕೆ. , ಜಯಶ್ರೀ ಎಂ.ಸಿ.  ಪ್ರಥಮ ಬಹುಮಾನ ಪಡೆದರು. ವಿಶ್ವವಿದ್ಯಾನಿಲಯ ಕಾಲೇಜಿನ ರಾಧಿಕಾ ಹಾಗೂ ಅಕ್ಷಿತ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಬೆಟ್ಟಂಪ್ಪಾಡಿ ಸ. ಪ್ರ. ದರ್ಜೆ ಕಾಲೇಜಿನ ಸಾರ್ಥಕ್. ಟಿ ,ರಕ್ಷಿತ್.ಎ. ರೈ ಪಡೆದು ಕೊಂಡಿದ್ದಾರೆ.

ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರಾದ ಅಮೃತಾ, ಭೂಮಿಕಾ, ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು