11:10 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ

13/10/2021, 17:58

ಮಂಗಳೂರು(reporterkarnataka.com):  ದ. ಕ.  ಜಿಲ್ಲಾ ಏಡ್ಸ್  ನಿಯಂತ್ರಣ ಇಲಾಖೆ ಹಾಗೂ  ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ  ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆಂಟ್ ಕಾಲೇಜಿನಲ್ಲಿ ಜರುಗಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಏಡ್ಸ್ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ. ಬದ್ರುದ್ದೀನ್ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯೇ ರಾಷ್ಟ್ರೀಯ ಸೇವಾ ಯೋಜನೆ ಎಂದರು.





ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಶೆಟ್ಟಿ ಮಾತನಾಡಿ, ವ್ಯಕ್ತಿತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವ ರಾ. ಸೇ. ಯೋ ಇಂದು ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದು  ಶ್ಲಾಘನೀಯ ಎಂದರು.

ಕಾಲೇಜಿನ ಕರೆಸ್ಪಾಂಡೆಂಟ್ ದೇವಾನಂದ ಪೈ, ಹಾಗೂ ಸಂಚಾಲಕ ಗಣೇಶ್ ಭಟ್, ಯೋಜನಾಧಿಕಾರಿ ರವಿ ಪ್ರಭಾ  ಉಪಸ್ಥಿತರಿದ್ದರು. 


ಏಡ್ಸ್ ನಿಯಂತ್ರಣ ಇಲಾಖೆಯ ಮೇಲ್ವಿಚಾರಕ ಮಹೇಶ್ ಹಾಗೂ ಸಿಬ್ಬಂದಿಗಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. 

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಕಾಲೇಜಿನ ಮನೀಶ್ ಬಿ. ಕೆ. , ಜಯಶ್ರೀ ಎಂ.ಸಿ.  ಪ್ರಥಮ ಬಹುಮಾನ ಪಡೆದರು. ವಿಶ್ವವಿದ್ಯಾನಿಲಯ ಕಾಲೇಜಿನ ರಾಧಿಕಾ ಹಾಗೂ ಅಕ್ಷಿತ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಬೆಟ್ಟಂಪ್ಪಾಡಿ ಸ. ಪ್ರ. ದರ್ಜೆ ಕಾಲೇಜಿನ ಸಾರ್ಥಕ್. ಟಿ ,ರಕ್ಷಿತ್.ಎ. ರೈ ಪಡೆದು ಕೊಂಡಿದ್ದಾರೆ.

ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರಾದ ಅಮೃತಾ, ಭೂಮಿಕಾ, ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು