3:09 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬೆಸೆಂಟ್ ಕಾಲೇಜಿನಲ್ಲಿ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ: ಮನೀಶ್ ಬಿ. ಕೆ., ಜಯಶ್ರೀ ಎಂ.ಸಿ. ಪ್ರಥಮ

13/10/2021, 17:58

ಮಂಗಳೂರು(reporterkarnataka.com):  ದ. ಕ.  ಜಿಲ್ಲಾ ಏಡ್ಸ್  ನಿಯಂತ್ರಣ ಇಲಾಖೆ ಹಾಗೂ  ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬೆಸೆಂಟ್ ಕಾಲೇಜಿನ ಎನ್ ಎಸ್ ಎಸ್ ಘಟಕದ  ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಿಗೆ ಏಡ್ಸ್ ಸಂಬಂಧಿತ ರಸ ಪ್ರಶ್ನೆ ಕಾರ್ಯಕ್ರಮ ಬೆಸೆಂಟ್ ಕಾಲೇಜಿನಲ್ಲಿ ಜರುಗಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಏಡ್ಸ್ ನಿಯಂತ್ರಣ ಇಲಾಖೆಯ ಅಧಿಕಾರಿ ಡಾ. ಬದ್ರುದ್ದೀನ್ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಶಕ್ತಿಯೇ ರಾಷ್ಟ್ರೀಯ ಸೇವಾ ಯೋಜನೆ ಎಂದರು.





ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಶೆಟ್ಟಿ ಮಾತನಾಡಿ, ವ್ಯಕ್ತಿತ್ವ ಮತ್ತು ಸೇವಾ ಮನೋಭಾವನೆಯನ್ನು ಬೆಳೆಸುವ ರಾ. ಸೇ. ಯೋ ಇಂದು ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವುದು  ಶ್ಲಾಘನೀಯ ಎಂದರು.

ಕಾಲೇಜಿನ ಕರೆಸ್ಪಾಂಡೆಂಟ್ ದೇವಾನಂದ ಪೈ, ಹಾಗೂ ಸಂಚಾಲಕ ಗಣೇಶ್ ಭಟ್, ಯೋಜನಾಧಿಕಾರಿ ರವಿ ಪ್ರಭಾ  ಉಪಸ್ಥಿತರಿದ್ದರು. 


ಏಡ್ಸ್ ನಿಯಂತ್ರಣ ಇಲಾಖೆಯ ಮೇಲ್ವಿಚಾರಕ ಮಹೇಶ್ ಹಾಗೂ ಸಿಬ್ಬಂದಿಗಳು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. 

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಕಾಲೇಜಿನ ಮನೀಶ್ ಬಿ. ಕೆ. , ಜಯಶ್ರೀ ಎಂ.ಸಿ.  ಪ್ರಥಮ ಬಹುಮಾನ ಪಡೆದರು. ವಿಶ್ವವಿದ್ಯಾನಿಲಯ ಕಾಲೇಜಿನ ರಾಧಿಕಾ ಹಾಗೂ ಅಕ್ಷಿತ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಬೆಟ್ಟಂಪ್ಪಾಡಿ ಸ. ಪ್ರ. ದರ್ಜೆ ಕಾಲೇಜಿನ ಸಾರ್ಥಕ್. ಟಿ ,ರಕ್ಷಿತ್.ಎ. ರೈ ಪಡೆದು ಕೊಂಡಿದ್ದಾರೆ.

ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರಾದ ಅಮೃತಾ, ಭೂಮಿಕಾ, ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು