4:28 AM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ದೇವೇಗೌಡ್ರು ವಿರೋಧ ಪಕ್ಷದ ನಾಯಕರಾಗಿದ್ರು, ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ?: ಸಿದ್ದರಾಮಯ್ಯ ಪ್ರಶ್ನೆ

13/10/2021, 17:33

ಬೆಂಗಳೂರು(reporterkarnataka.com): ದೇವರಾಜ ಅರಸ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಚ್. ಡಿ. ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ..?

ಇದು ಮಾಜಿ ಮುಖ್ಯಮಂತ್ರಿ  ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಶ್ನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಕ್ಷೇಪಾರ್ಹ ಹೇಳಿಕೆಗೆ ಕೆಂಡಾಮಂಡಲವಾದ ಸಿದ್ದರಾಮಯ್ಯ ಈ ಪ್ರಶ್ನೆ ಹಾಕಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಇಂತಹ ಬೆದರಿಕೆಗೆ ಜಗ್ಗವವನ್ನಲ್ಲ. 1971ರಲ್ಲಿ ನಾನು ಕಾನೂನು ವಿದ್ಯಾರ್ಥಿಯಾಗಿದ್ದಾಗ ರಾಜಕೀಯ ಪ್ರವೇಶಿಸಿದ್ದೇನೆ. 50 ವರ್ಷಗಳ ರಾಜಕೀಯ ಮಾಡಿದ್ದೇನೆ. ಕುಮಾರಸ್ವಾಮಿಯವರು ಯಾವಾಗ ರಾಜಕೀಯಕ್ಕೆ ಬಂದ್ರು? ದೇವೇಗೌಡ ಅವರು ಮುಖ್ಯಮಂತ್ರಿಯಾದ ಬಳಿಕ 1997ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದ್ರು. ಒಬ್ಬ ಮಾಜಿ ಮುಖ್ಯಮಂತ್ರಿ ತುಂಬಾ ಲಘುವಾಗಿ ಮಾತನಾಡಬಾರದು. ಸಾಂವಿಧಾನಿಕ ಹುದ್ದೆಯ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು