5:05 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು