10:35 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು