10:16 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಅಂದವಾದ ಸುಂದರ ಕಣ್ಣನ್ನು ಜೋಪಾನವಾಗಿ ರಕ್ಷಿಸಿ: ಇಂದು ವಿಶ್ವ ದೃಷ್ಟಿ ದಿನ

14/10/2021, 07:59

ದೃಷ್ಟಿ ಎಷ್ಟು ಮುಖ್ಯ ವೆಂದರೆ ನಾವು ಇಡುವ ಪ್ರತಿಯೊಂದು ಹೆಜ್ಜೆಗು ದೃಷ್ಟಿ ಬೇಕೇ ಬೇಕು. ಕಣ್ಣಿನ ದೃಷ್ಟಿಯಿಂದ ನಾವು ಇಡೀ ಲೋಕವನ್ನೇ ಕಾಣುತ್ತೇವೆ. ದೃಷ್ಟಿ ಇಲ್ಲದ ಮನುಷ್ಯ ವ್ಯರ್ಥ. ಅವನು/ ಅವಳು ಏನನ್ನೂ ಕಾಣಲು ಸಾಧ್ಯವಿಲ್ಲ. ಕತ್ತಲೆಯ ಸಮಯವನ್ನು ಬಿಟ್ಟು ಮಿಕ್ಕಿದ ಎಲ್ಲಾ ಸಮಯದಲ್ಲಿ ಎಲ್ಲವನ್ನೂ ವೀಕ್ಷಿಸುವ ಶಕ್ತಿ ಕಣ್ಣಿಗೆ ಇದೆ. ಕಣ್ಣು ಇಲ್ಲದ ಮನುಷ್ಯ ತನ್ನನ್ನು ತಾನು ನೋಡಿಕೊಳ್ಳಲು ಅಸಾಧ್ಯ. ದೃಷ್ಟಿ ಸಮಸ್ಯೆ ಇದ್ದರೆ ಅದನು ಹೇಗಾದರು ಮಾಡಿ ಸರಿ ಪಡಿಸಲಾಗುತ್ತದೆ ಆದರೆ ಕಣ್ಣೇ ಇಲ್ಲವಾದರೆ ಏನು ಮಾಡಲು ಸಾಧ್ಯವಿಲ್ಲ. ದೃಷ್ಟಿಗೆ ಮನುಜ, ಪ್ರಾಣಿ, ಜಲಚರ, ಹೂ, ಗಿಡ, ಹಣ್ಣು, ಕಾಯಿ, ನದಿ ಸಾಗರ ಎಲ್ಲವೂ ಕಾಣುತ್ತದೆ. ಕತ್ತಲೆ ಹೊರತುಪಡಿಸಿದರೆ ಎಲ್ಲಾ ಸಮಯದಲ್ಲೂ ಎಲ್ಲವನ್ನು ವೀಕ್ಷಿಸುವ ಸಾಮರ್ಥ್ಯ ಕಣ್ಣಿನ ದೃಷ್ಟಿಗಿದೆ. ಕಣ್ಣಿನ ದೃಷ್ಟಿ ಸಮರ್ಪಕವಾಗಿದ್ದರೆ ಮನುಷ್ಯನಿಗೆ ಅದುವೇ ದೊಡ್ಡ ವರದಾನ. ಆದರೆ ಕೆಲವರಿಗೆ ಈ ದೃಷ್ಟಿ ಸಾಮರ್ಥ್ಯದ ಕೊರತೆಯಿರುತ್ತದೆ. ಅದರಲ್ಲೂ ದೃಷ್ಟಿಹೀನರಿಗೆ ಅಥವಾ ಅಂಧರಿಗೆ ಬಾಳೆಲ್ಲಾ ಕತ್ತಲೆಯೇ. ಇದನ್ನು ಪರಿಗಣಿಸಿಯೇ ಕಣ್ಣಿನ ಆರೋಗ್ಯದ ಮಹತ್ವವನ್ನು ಸಾರಲು ಪ್ರತಿವರ್ಷ ಅಕ್ಟೋಬರ್‌ ತಿಂಗಳ ಎರಡನೇ ಗುರುವಾರವನ್ನು ವಿಶ್ವ ದೃಷ್ಟಿ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್‌ 14 ರಂದು ವಿಶ್ವ ದೃಷ್ಟಿ ದಿನ ಅಥವಾ ವರ್ಲ್ಡ್‌ ಸೈಟ್‌ ಡೇಯನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ದೇವರು ನಮಗೆ ಕಣ್ಣು ಕೊಟ್ಟಿದ್ದಾರೆ ಆ ಕಣ್ಣನ್ನು ನಾವು ಆರೋಗ್ಯವಾಗಿ ನೋಡಿಕೊಳ್ಳಬೇಕು. ಮೊಬೈಲ್ ನೋಡುವುದರಿಂದ ದೃಷ್ಟಿ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. ಆದುದರಿಂದ ನಾವು ಎಚ್ಚರದಿಂದ ಮಾಧ್ಯಮದ ಬಳಕೆ ಮಾಡಬೇಕು ಹಾಗೂ ನಮ್ಮ ಆರೋಗ್ಯದ ರಕ್ಷಣೆಯನ್ನೂ ಮಾಡಬೇಕು. ನಮಗೆ ಕಣ್ಣು ಇದ್ದರೆ ದೃಷ್ಟಿ ಇರುತ್ತದೆ ದೃಷ್ಟಿ ಇದ್ದರೆ ಇಡೀ ಸೃಷ್ಟಿಯನ್ನೇ ನೋಡಬಹುದು.ಆ ಸೃಷ್ಟಿಯನ್ನು ನೋಡಿ ನಾವು ಸುಖಮಯ ಜೀವನವನ್ನು ನಡೆಸಲು ಸಾಧ್ಯ. ಅಂದವಾದ ಸುಂದರ ಕಣ್ಣುಗಳನ್ನು ಜೋಪಾನವಾಗಿ ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸತ್ತ ಮೇಲೆ ನಮ್ಮ ಕಣ್ಣು ಸರ್ವನಾಶವಾಗಿ ಹೋಗುತ್ತದೆ. ಆದುದರಿಂದ ನಾವು ನಮ್ಮ ಕಣ್ಣುಗಳನ್ನ ದಾನ ಮಾಡಿ ಅಂದರ ಬಾಳಿನಲ್ಲಿ ಬೆಳಕಾಗಿ ಬರುವಂತೆ ಮಾಡಿ ನಮಗೆ ದೇವರು ಕೊಟ್ಟ ಈ ಪುಣ್ಯ ಜೀವನವನ್ನು ಸಾರ್ಥಕ ಗೊಳಿಸೋಣ. ಆಗ ನಮ್ಮ ಬಾಳು ಸಂಪೂರ್ಣಗೊಳ್ಳುತ್ತದೆ. ಆಕಾಶದಲ್ಲಿ ಮಿನುಗುವ ನಕ್ಷತ್ರವಾಗಲು ಸಾಧ್ಯವಿಲ್ಲದಿದ್ದರೂ, ಕತ್ತಲೆ ಕೋಣೆಯನ್ನು ಬೆಳಗುವ ದೀಪವಾಗಲು ಪ್ರಯತ್ನಿಸೋಣ.

✍️

ಇತ್ತೀಚಿನ ಸುದ್ದಿ

ಜಾಹೀರಾತು