4:59 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಅಂದವಾದ ಸುಂದರ ಕಣ್ಣನ್ನು ಜೋಪಾನವಾಗಿ ರಕ್ಷಿಸಿ: ಇಂದು ವಿಶ್ವ ದೃಷ್ಟಿ ದಿನ

14/10/2021, 07:59

ದೃಷ್ಟಿ ಎಷ್ಟು ಮುಖ್ಯ ವೆಂದರೆ ನಾವು ಇಡುವ ಪ್ರತಿಯೊಂದು ಹೆಜ್ಜೆಗು ದೃಷ್ಟಿ ಬೇಕೇ ಬೇಕು. ಕಣ್ಣಿನ ದೃಷ್ಟಿಯಿಂದ ನಾವು ಇಡೀ ಲೋಕವನ್ನೇ ಕಾಣುತ್ತೇವೆ. ದೃಷ್ಟಿ ಇಲ್ಲದ ಮನುಷ್ಯ ವ್ಯರ್ಥ. ಅವನು/ ಅವಳು ಏನನ್ನೂ ಕಾಣಲು ಸಾಧ್ಯವಿಲ್ಲ. ಕತ್ತಲೆಯ ಸಮಯವನ್ನು ಬಿಟ್ಟು ಮಿಕ್ಕಿದ ಎಲ್ಲಾ ಸಮಯದಲ್ಲಿ ಎಲ್ಲವನ್ನೂ ವೀಕ್ಷಿಸುವ ಶಕ್ತಿ ಕಣ್ಣಿಗೆ ಇದೆ. ಕಣ್ಣು ಇಲ್ಲದ ಮನುಷ್ಯ ತನ್ನನ್ನು ತಾನು ನೋಡಿಕೊಳ್ಳಲು ಅಸಾಧ್ಯ. ದೃಷ್ಟಿ ಸಮಸ್ಯೆ ಇದ್ದರೆ ಅದನು ಹೇಗಾದರು ಮಾಡಿ ಸರಿ ಪಡಿಸಲಾಗುತ್ತದೆ ಆದರೆ ಕಣ್ಣೇ ಇಲ್ಲವಾದರೆ ಏನು ಮಾಡಲು ಸಾಧ್ಯವಿಲ್ಲ. ದೃಷ್ಟಿಗೆ ಮನುಜ, ಪ್ರಾಣಿ, ಜಲಚರ, ಹೂ, ಗಿಡ, ಹಣ್ಣು, ಕಾಯಿ, ನದಿ ಸಾಗರ ಎಲ್ಲವೂ ಕಾಣುತ್ತದೆ. ಕತ್ತಲೆ ಹೊರತುಪಡಿಸಿದರೆ ಎಲ್ಲಾ ಸಮಯದಲ್ಲೂ ಎಲ್ಲವನ್ನು ವೀಕ್ಷಿಸುವ ಸಾಮರ್ಥ್ಯ ಕಣ್ಣಿನ ದೃಷ್ಟಿಗಿದೆ. ಕಣ್ಣಿನ ದೃಷ್ಟಿ ಸಮರ್ಪಕವಾಗಿದ್ದರೆ ಮನುಷ್ಯನಿಗೆ ಅದುವೇ ದೊಡ್ಡ ವರದಾನ. ಆದರೆ ಕೆಲವರಿಗೆ ಈ ದೃಷ್ಟಿ ಸಾಮರ್ಥ್ಯದ ಕೊರತೆಯಿರುತ್ತದೆ. ಅದರಲ್ಲೂ ದೃಷ್ಟಿಹೀನರಿಗೆ ಅಥವಾ ಅಂಧರಿಗೆ ಬಾಳೆಲ್ಲಾ ಕತ್ತಲೆಯೇ. ಇದನ್ನು ಪರಿಗಣಿಸಿಯೇ ಕಣ್ಣಿನ ಆರೋಗ್ಯದ ಮಹತ್ವವನ್ನು ಸಾರಲು ಪ್ರತಿವರ್ಷ ಅಕ್ಟೋಬರ್‌ ತಿಂಗಳ ಎರಡನೇ ಗುರುವಾರವನ್ನು ವಿಶ್ವ ದೃಷ್ಟಿ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್‌ 14 ರಂದು ವಿಶ್ವ ದೃಷ್ಟಿ ದಿನ ಅಥವಾ ವರ್ಲ್ಡ್‌ ಸೈಟ್‌ ಡೇಯನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ದೇವರು ನಮಗೆ ಕಣ್ಣು ಕೊಟ್ಟಿದ್ದಾರೆ ಆ ಕಣ್ಣನ್ನು ನಾವು ಆರೋಗ್ಯವಾಗಿ ನೋಡಿಕೊಳ್ಳಬೇಕು. ಮೊಬೈಲ್ ನೋಡುವುದರಿಂದ ದೃಷ್ಟಿ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. ಆದುದರಿಂದ ನಾವು ಎಚ್ಚರದಿಂದ ಮಾಧ್ಯಮದ ಬಳಕೆ ಮಾಡಬೇಕು ಹಾಗೂ ನಮ್ಮ ಆರೋಗ್ಯದ ರಕ್ಷಣೆಯನ್ನೂ ಮಾಡಬೇಕು. ನಮಗೆ ಕಣ್ಣು ಇದ್ದರೆ ದೃಷ್ಟಿ ಇರುತ್ತದೆ ದೃಷ್ಟಿ ಇದ್ದರೆ ಇಡೀ ಸೃಷ್ಟಿಯನ್ನೇ ನೋಡಬಹುದು.ಆ ಸೃಷ್ಟಿಯನ್ನು ನೋಡಿ ನಾವು ಸುಖಮಯ ಜೀವನವನ್ನು ನಡೆಸಲು ಸಾಧ್ಯ. ಅಂದವಾದ ಸುಂದರ ಕಣ್ಣುಗಳನ್ನು ಜೋಪಾನವಾಗಿ ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸತ್ತ ಮೇಲೆ ನಮ್ಮ ಕಣ್ಣು ಸರ್ವನಾಶವಾಗಿ ಹೋಗುತ್ತದೆ. ಆದುದರಿಂದ ನಾವು ನಮ್ಮ ಕಣ್ಣುಗಳನ್ನ ದಾನ ಮಾಡಿ ಅಂದರ ಬಾಳಿನಲ್ಲಿ ಬೆಳಕಾಗಿ ಬರುವಂತೆ ಮಾಡಿ ನಮಗೆ ದೇವರು ಕೊಟ್ಟ ಈ ಪುಣ್ಯ ಜೀವನವನ್ನು ಸಾರ್ಥಕ ಗೊಳಿಸೋಣ. ಆಗ ನಮ್ಮ ಬಾಳು ಸಂಪೂರ್ಣಗೊಳ್ಳುತ್ತದೆ. ಆಕಾಶದಲ್ಲಿ ಮಿನುಗುವ ನಕ್ಷತ್ರವಾಗಲು ಸಾಧ್ಯವಿಲ್ಲದಿದ್ದರೂ, ಕತ್ತಲೆ ಕೋಣೆಯನ್ನು ಬೆಳಗುವ ದೀಪವಾಗಲು ಪ್ರಯತ್ನಿಸೋಣ.

✍️

ಇತ್ತೀಚಿನ ಸುದ್ದಿ

ಜಾಹೀರಾತು