10:38 AM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಅಂದವಾದ ಸುಂದರ ಕಣ್ಣನ್ನು ಜೋಪಾನವಾಗಿ ರಕ್ಷಿಸಿ: ಇಂದು ವಿಶ್ವ ದೃಷ್ಟಿ ದಿನ

14/10/2021, 07:59

ದೃಷ್ಟಿ ಎಷ್ಟು ಮುಖ್ಯ ವೆಂದರೆ ನಾವು ಇಡುವ ಪ್ರತಿಯೊಂದು ಹೆಜ್ಜೆಗು ದೃಷ್ಟಿ ಬೇಕೇ ಬೇಕು. ಕಣ್ಣಿನ ದೃಷ್ಟಿಯಿಂದ ನಾವು ಇಡೀ ಲೋಕವನ್ನೇ ಕಾಣುತ್ತೇವೆ. ದೃಷ್ಟಿ ಇಲ್ಲದ ಮನುಷ್ಯ ವ್ಯರ್ಥ. ಅವನು/ ಅವಳು ಏನನ್ನೂ ಕಾಣಲು ಸಾಧ್ಯವಿಲ್ಲ. ಕತ್ತಲೆಯ ಸಮಯವನ್ನು ಬಿಟ್ಟು ಮಿಕ್ಕಿದ ಎಲ್ಲಾ ಸಮಯದಲ್ಲಿ ಎಲ್ಲವನ್ನೂ ವೀಕ್ಷಿಸುವ ಶಕ್ತಿ ಕಣ್ಣಿಗೆ ಇದೆ. ಕಣ್ಣು ಇಲ್ಲದ ಮನುಷ್ಯ ತನ್ನನ್ನು ತಾನು ನೋಡಿಕೊಳ್ಳಲು ಅಸಾಧ್ಯ. ದೃಷ್ಟಿ ಸಮಸ್ಯೆ ಇದ್ದರೆ ಅದನು ಹೇಗಾದರು ಮಾಡಿ ಸರಿ ಪಡಿಸಲಾಗುತ್ತದೆ ಆದರೆ ಕಣ್ಣೇ ಇಲ್ಲವಾದರೆ ಏನು ಮಾಡಲು ಸಾಧ್ಯವಿಲ್ಲ. ದೃಷ್ಟಿಗೆ ಮನುಜ, ಪ್ರಾಣಿ, ಜಲಚರ, ಹೂ, ಗಿಡ, ಹಣ್ಣು, ಕಾಯಿ, ನದಿ ಸಾಗರ ಎಲ್ಲವೂ ಕಾಣುತ್ತದೆ. ಕತ್ತಲೆ ಹೊರತುಪಡಿಸಿದರೆ ಎಲ್ಲಾ ಸಮಯದಲ್ಲೂ ಎಲ್ಲವನ್ನು ವೀಕ್ಷಿಸುವ ಸಾಮರ್ಥ್ಯ ಕಣ್ಣಿನ ದೃಷ್ಟಿಗಿದೆ. ಕಣ್ಣಿನ ದೃಷ್ಟಿ ಸಮರ್ಪಕವಾಗಿದ್ದರೆ ಮನುಷ್ಯನಿಗೆ ಅದುವೇ ದೊಡ್ಡ ವರದಾನ. ಆದರೆ ಕೆಲವರಿಗೆ ಈ ದೃಷ್ಟಿ ಸಾಮರ್ಥ್ಯದ ಕೊರತೆಯಿರುತ್ತದೆ. ಅದರಲ್ಲೂ ದೃಷ್ಟಿಹೀನರಿಗೆ ಅಥವಾ ಅಂಧರಿಗೆ ಬಾಳೆಲ್ಲಾ ಕತ್ತಲೆಯೇ. ಇದನ್ನು ಪರಿಗಣಿಸಿಯೇ ಕಣ್ಣಿನ ಆರೋಗ್ಯದ ಮಹತ್ವವನ್ನು ಸಾರಲು ಪ್ರತಿವರ್ಷ ಅಕ್ಟೋಬರ್‌ ತಿಂಗಳ ಎರಡನೇ ಗುರುವಾರವನ್ನು ವಿಶ್ವ ದೃಷ್ಟಿ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್‌ 14 ರಂದು ವಿಶ್ವ ದೃಷ್ಟಿ ದಿನ ಅಥವಾ ವರ್ಲ್ಡ್‌ ಸೈಟ್‌ ಡೇಯನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ದೇವರು ನಮಗೆ ಕಣ್ಣು ಕೊಟ್ಟಿದ್ದಾರೆ ಆ ಕಣ್ಣನ್ನು ನಾವು ಆರೋಗ್ಯವಾಗಿ ನೋಡಿಕೊಳ್ಳಬೇಕು. ಮೊಬೈಲ್ ನೋಡುವುದರಿಂದ ದೃಷ್ಟಿ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. ಆದುದರಿಂದ ನಾವು ಎಚ್ಚರದಿಂದ ಮಾಧ್ಯಮದ ಬಳಕೆ ಮಾಡಬೇಕು ಹಾಗೂ ನಮ್ಮ ಆರೋಗ್ಯದ ರಕ್ಷಣೆಯನ್ನೂ ಮಾಡಬೇಕು. ನಮಗೆ ಕಣ್ಣು ಇದ್ದರೆ ದೃಷ್ಟಿ ಇರುತ್ತದೆ ದೃಷ್ಟಿ ಇದ್ದರೆ ಇಡೀ ಸೃಷ್ಟಿಯನ್ನೇ ನೋಡಬಹುದು.ಆ ಸೃಷ್ಟಿಯನ್ನು ನೋಡಿ ನಾವು ಸುಖಮಯ ಜೀವನವನ್ನು ನಡೆಸಲು ಸಾಧ್ಯ. ಅಂದವಾದ ಸುಂದರ ಕಣ್ಣುಗಳನ್ನು ಜೋಪಾನವಾಗಿ ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸತ್ತ ಮೇಲೆ ನಮ್ಮ ಕಣ್ಣು ಸರ್ವನಾಶವಾಗಿ ಹೋಗುತ್ತದೆ. ಆದುದರಿಂದ ನಾವು ನಮ್ಮ ಕಣ್ಣುಗಳನ್ನ ದಾನ ಮಾಡಿ ಅಂದರ ಬಾಳಿನಲ್ಲಿ ಬೆಳಕಾಗಿ ಬರುವಂತೆ ಮಾಡಿ ನಮಗೆ ದೇವರು ಕೊಟ್ಟ ಈ ಪುಣ್ಯ ಜೀವನವನ್ನು ಸಾರ್ಥಕ ಗೊಳಿಸೋಣ. ಆಗ ನಮ್ಮ ಬಾಳು ಸಂಪೂರ್ಣಗೊಳ್ಳುತ್ತದೆ. ಆಕಾಶದಲ್ಲಿ ಮಿನುಗುವ ನಕ್ಷತ್ರವಾಗಲು ಸಾಧ್ಯವಿಲ್ಲದಿದ್ದರೂ, ಕತ್ತಲೆ ಕೋಣೆಯನ್ನು ಬೆಳಗುವ ದೀಪವಾಗಲು ಪ್ರಯತ್ನಿಸೋಣ.

✍️

ಇತ್ತೀಚಿನ ಸುದ್ದಿ

ಜಾಹೀರಾತು