12:53 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

2 ಸಾವಿರ ವರ್ಷ ಇತಿಹಾಸವುಳ್ಳ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ: 10 ತಲೆಮಾರಿನ ಮಠ ಪರಂಪರೆ

14/10/2021, 13:52

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ರಾಜ್ಯದ ಪ್ರಸಿದ್ಧ ಶಿವ ದೇವಾಲಯಗಳಲ್ಲ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದೆ. ಭಕ್ತರ ಇಷ್ಟಾರ್ಥ ನೆರವೇರಿಸುವ ಸೋಮಲಿಂಗ ಎಂದೇ ಇದು ನಾಡಿನುದ್ಧಗಲಕ್ಕೂ ಪ್ರಸಿದ್ಧಿ ಪಡೆದಿದೆ.

ದೇವಾಲಯದಲ್ಲಿ ಸೋಮೇಶ್ವರನಿಗೆ ನಿತ್ಯ ಪೂಜೆ ನಡೆಯುತ್ತದೆ. ಭಕ್ತರಿಗೆ ಅನ್ನದಾಸೋಹ ನೆರವೇರುತ್ತಿದೆ. ಮಠದಲ್ಲಿ ಭಕ್ತರಿಗೆ ಸ್ವಾಮೀಜಿ ಪ್ರತಿ ದಿನ ಸಂಜೆ ದರ್ಶನ ಕೊಡುತ್ತಾರೆ. ಹರಕೆ ಹೊತ್ತ ಭಕ್ತರು ಇಲ್ಲಿಗೆ ಬಂದು ಗುರುಗಳ ಪಾದಪೂಜೆ ನೆರವೇರಿಸುತ್ತಾರೆ.ದೇಗುಲ ಮಠ ಪರಂಪರೆಯನ್ನು ಹೊಂದಿದೆ.


10 ತಲೆಮಾರುಗಳ ಇತಿಹಾಸವಿರುವ ಮಠ ಪರಂಪರೆಯನ್ನು ದೇಗುಲ ಹೊಂದಿದೆ. ಈಗಿನ 11ನೇ ತಲೆಮಾರಿನ ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಅವರು ಗುರುಪೀಠವನ್ನು ಅಲಂಕರಿಸಿದ್ದಾರೆ. 10 ತಲೆಮಾರಿನಿಂದ ಮಠದಲ್ಲಿ ನಡೆದುಕೊಂಡು ಬರುತ್ತಿರುವ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಚಾಚು ತಪ್ಪದೆ ಪಾಲಿಸಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಂಸಾರ ಪೀಠವಾದ ಇಲ್ಲಿನ ಮಠದ ದೇವೇಂದ್ರ ಒಡೆಯಾರ್ ಸ್ವಾಮೀಜಿ ದೇವರ ಮತ್ತು ಭಕ್ತರ ಇಷ್ಟಾರ್ಥಕ್ಕನುಗುಣವಾಗಿ ಮಠವನ್ನು ಮುನ್ನಡೆಸುತ್ತಿದ್ದಾರೆ.


ಸ್ವಾಮೀಜಿಯವರು ಸೋಮಲಿಂಗೇಶ್ವರನ ಅಪ್ಪಣೆಯಂತೆ ಅನಾಥರಿಗೆ ಆಶ್ರಮ ನಿರ್ಮಿಸಿದ್ದಾರೆ. ಅದರ ಜತೆಗೆ ಶಿವನ ಬೃಹತ್ ಲಿಂಗವನ್ನು ಪ್ರತಿಷ್ಠಾಪಿಸುವ ಸಂಕಲ್ಪ ಹೊಂದಿದ್ದಾರೆ. ಸುಮಾರು ಒಂದು ಎರಕೆ ಪ್ರದೇಶದಲ್ಲಿ 108 ಅಡಿ ಎತ್ತರದ ಬೃಹತ್ ಶಿವಲಿಂಗ ತಲೆ ಎತ್ತಿ ಇಡೀ ವಿಜಯಪುರ ಜಿಲ್ಲೆ ಮಾತ್ರವೇಕೆ ಇಡೀ ರಾಜ್ಯವನ್ನು ಪಾವನಗೊಳಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು