5:59 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

2 ಸಾವಿರ ವರ್ಷ ಇತಿಹಾಸವುಳ್ಳ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ: 10 ತಲೆಮಾರಿನ ಮಠ ಪರಂಪರೆ

14/10/2021, 13:52

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ರಾಜ್ಯದ ಪ್ರಸಿದ್ಧ ಶಿವ ದೇವಾಲಯಗಳಲ್ಲ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದೆ. ಭಕ್ತರ ಇಷ್ಟಾರ್ಥ ನೆರವೇರಿಸುವ ಸೋಮಲಿಂಗ ಎಂದೇ ಇದು ನಾಡಿನುದ್ಧಗಲಕ್ಕೂ ಪ್ರಸಿದ್ಧಿ ಪಡೆದಿದೆ.

ದೇವಾಲಯದಲ್ಲಿ ಸೋಮೇಶ್ವರನಿಗೆ ನಿತ್ಯ ಪೂಜೆ ನಡೆಯುತ್ತದೆ. ಭಕ್ತರಿಗೆ ಅನ್ನದಾಸೋಹ ನೆರವೇರುತ್ತಿದೆ. ಮಠದಲ್ಲಿ ಭಕ್ತರಿಗೆ ಸ್ವಾಮೀಜಿ ಪ್ರತಿ ದಿನ ಸಂಜೆ ದರ್ಶನ ಕೊಡುತ್ತಾರೆ. ಹರಕೆ ಹೊತ್ತ ಭಕ್ತರು ಇಲ್ಲಿಗೆ ಬಂದು ಗುರುಗಳ ಪಾದಪೂಜೆ ನೆರವೇರಿಸುತ್ತಾರೆ.ದೇಗುಲ ಮಠ ಪರಂಪರೆಯನ್ನು ಹೊಂದಿದೆ.


10 ತಲೆಮಾರುಗಳ ಇತಿಹಾಸವಿರುವ ಮಠ ಪರಂಪರೆಯನ್ನು ದೇಗುಲ ಹೊಂದಿದೆ. ಈಗಿನ 11ನೇ ತಲೆಮಾರಿನ ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಅವರು ಗುರುಪೀಠವನ್ನು ಅಲಂಕರಿಸಿದ್ದಾರೆ. 10 ತಲೆಮಾರಿನಿಂದ ಮಠದಲ್ಲಿ ನಡೆದುಕೊಂಡು ಬರುತ್ತಿರುವ ಎಲ್ಲ ಧಾರ್ಮಿಕ ವಿಧಿ ವಿಧಾನಗಳನ್ನು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಚಾಚು ತಪ್ಪದೆ ಪಾಲಿಸಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಂಸಾರ ಪೀಠವಾದ ಇಲ್ಲಿನ ಮಠದ ದೇವೇಂದ್ರ ಒಡೆಯಾರ್ ಸ್ವಾಮೀಜಿ ದೇವರ ಮತ್ತು ಭಕ್ತರ ಇಷ್ಟಾರ್ಥಕ್ಕನುಗುಣವಾಗಿ ಮಠವನ್ನು ಮುನ್ನಡೆಸುತ್ತಿದ್ದಾರೆ.


ಸ್ವಾಮೀಜಿಯವರು ಸೋಮಲಿಂಗೇಶ್ವರನ ಅಪ್ಪಣೆಯಂತೆ ಅನಾಥರಿಗೆ ಆಶ್ರಮ ನಿರ್ಮಿಸಿದ್ದಾರೆ. ಅದರ ಜತೆಗೆ ಶಿವನ ಬೃಹತ್ ಲಿಂಗವನ್ನು ಪ್ರತಿಷ್ಠಾಪಿಸುವ ಸಂಕಲ್ಪ ಹೊಂದಿದ್ದಾರೆ. ಸುಮಾರು ಒಂದು ಎರಕೆ ಪ್ರದೇಶದಲ್ಲಿ 108 ಅಡಿ ಎತ್ತರದ ಬೃಹತ್ ಶಿವಲಿಂಗ ತಲೆ ಎತ್ತಿ ಇಡೀ ವಿಜಯಪುರ ಜಿಲ್ಲೆ ಮಾತ್ರವೇಕೆ ಇಡೀ ರಾಜ್ಯವನ್ನು ಪಾವನಗೊಳಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು