4:55 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ, ನವದುರ್ಗೆಯರ ದರ್ಶನ

14/10/2021, 18:54

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದ ಆಯುಧ ಪೂಜೆಯ ದಿನವಾದ ಇಂದು ಕುದ್ರೋಳಿ ದೇಗುಲದಲ್ಲಿ ಭಕ್ತಜನರ ದಟ್ಟಣೆ ವಿಪರೀತವಾಗಿತ್ತು. ಸರಕಾರಿ ರಜೆ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಬೃಹತ್ ಜನಸಾಗರವೇ ನೆರೆದಿತ್ತು.

ಕುದ್ರೋಳಿ ದೇಗುಲಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು. ಸಿಎಂ ಅವರು ಸಂಜೆ 5 ಗಂಟೆಗೆ ಭೇಟಿ ನೀಡುವುದರಿಂದ ಭದ್ರತಾ ಕಾರಣಗಳಿಗಾಗಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆಯುಧ ಪೂಜೆಯ ದಿನವಾದ ಇಂದು ಯಾವುದೇ ವಿವಿಐಪಿಗಳು ಇಲ್ಲದ ಕಾರಣ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಾರದೆ ಹಾಗೂ ನವದುರ್ಗೆಯರನ್ನು ಕಣ್ತುಂಬಿಸಿಕೊಂಡರು. 

ಇಂದು ಬೆಳಗ್ಗಿನಿಂದಲೇ ಭಾರಿ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಾರದೆ, ನವದುರ್ಗೆ ಹಾಗೂ ವಿಘ್ನನಿವಾರಕನ ಕಂಡು ಪುನೀತರಾದರು.

ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಕಳೆದ ಗುರುವಾರ

ಆರಂಭವಾಯಿತು. ಗುರುವಾರ ಬೆಳಗ್ಗೆ  9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು