2:01 PM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ; ಹೆತ್ತವರ ಆಕ್ರೋಶ

14/10/2021, 19:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ವಸತಿ ಶಾಲೆಯೊಂದರ ಗಣಿತ ಶಿಕ್ಷಣ ಕಾಮ ಪುರಾಣ ಬಿಚ್ಚಿಕೊಂಡಿದೆ. ಹೈಸ್ಕೂಲ್ ನಲ್ಲಿ ಕಲಿಯುತ್ತಿರುವ ಹದಿಹರೆಯದ ವಿದ್ಯಾರ್ಥಿನಿಯರ ಜತೆ ಈತನ ಅಶ್ಲೀಲ, ಅಸಭ್ಯ ವರ್ತನೆ ಬಯಲಾಗಿದೆ. ತನ್ನ ಕಾಮಾಯಣ ಬಯಲಾಗುತ್ತಿದ್ದಂತೆ ಶಿಕ್ಷಕ ಪರಾರಿಯಾಗಿದ್ದಾನೆ.

ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸುಶಿಕ್ಷಿತ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಇಲ್ಲಿ ಅತಿಥಿ ಗಣಿತ ಶಿಕ್ಷಕ ತನ್ನ ವಿದ್ಯಾರ್ಥಿನಿಯರ ಜತೆ ಅಸಹ್ಯವಾಗಿ ವರ್ತಿಸಿರುವ ವೀಡಿಯೊ ಬಯಲಾಗಿದೆ.

ಕಷ್ಟಪಟ್ಟು ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಬಡ ಹೆಣ್ಮಕ್ಕಳು ವಸತಿ ಶಾಲೆಯ ಪ್ರವೇಶ ಪಡೆಯುತ್ತಾರೆ. ಮನೆಯವರು ಕೂಡ ತಮ್ಮ ಮಕ್ಕಳು ಸುರಕ್ಷಿತವಾಗಿ ಶಿಕ್ಷಣ ಪಡೆಯುತ್ತಾರೆ ಎಂಬ ನಂಬಿಕೆ ಹೊಂದಿರುತ್ತಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡಲು ಸಾಧ್ಯ? ಶಿಕ್ಷಣ ಕೊಡಬೇಕಾದ, ತನ್ನ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಜೋಪಾನ ಮಾಡಬೇಕಾದ ಶಿಕ್ಷಕನೇ ಹಲ್ಕಾ ಕೆಲಸಕ್ಕೆ ಕೈಹಾಕಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾನೆ.

ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರೌಢಾವಸ್ಥೆಗೆ ಬಂದಿರುವ 7,8 ,9, ಮತ್ತು 10 ನೇ ತರಗತಿಗಳಲ್ಲಿ ಕಲಿಯುತ್ತಿರುವ ಹೆಣ್ಮಕ್ಕಳಿದ್ದಾರೆ. ಆದರೆ ಇಲ್ಲಿನ ಗಣಿತ ಶಿಕ್ಷಕನ ವಿದ್ಯಾರ್ಥಿನಿಯರ ಜತೆ ಅಶ್ಲೀಲವಾಗಿ, ಅಸಭ್ಯವಾಗಿ ನಡೆದು ಕೊಳ್ಳುತ್ತಿರುವ ವಿಡಿಯೋ ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಕಂಡು ಹೌಹಾರಿದ ಶಿಕ್ಷಕ ಇಂದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಈ ಶಿಕ್ಷಕನ ದುರ್ವರ್ತನೆ ಕಂಡ ಗ್ರಾಮಸ್ಥರು ವಸತಿ ನಿಲಯಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕೆಟ್ಟ ಶಿಕ್ಷಕರನ್ನು ಅಮಾನತು ಮಾಡಿ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಹೆಣ್ಣು ಮಕ್ಕಳ ಜತೆ ಅಸಹ್ಯವಾಗಿ ವರ್ತಿಸುವ ಶಿಕ್ಷಕನನ್ನು ತಕ್ಷಣ ಅಮಾನತು ಮಾಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅನಿತಾ ಬಿ ಮಂತ್ರಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು