8:49 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು