3:24 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು