1:08 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು