3:30 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು