11:58 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು !

15/10/2021, 18:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ  ಆತಂಕದ ಪರಿಸ್ಥಿತಿ ಎದುರಾಗಿದೆ.

ಹಲ್ಯಾಳ ಗ್ರಾಮದ ಸೇತುವೆಯ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಓಡಾಡುತ್ತಿದ್ದರೂ ಕೂಡ ಹದಿನೈದು ಅಡಿಯಷ್ಟು ಉದ್ದದ ಮೊಸಳೆ ಜತ್ತ ಜಾಂಬೋಟಿ ಹೆದ್ದಾರಿಯಲ್ಲಿ ಪತ್ತೆಯಾಗಿತ್ತು.

ಇದರಿಂದ ಭಯಗೊಂಡ ವಾಹನ ಸವಾರರು ಕೆಲಹೊತ್ತು ಸಂಚಾರ ಸ್ಥಗಿತಗೊಳಿಸಿದ್ದರು.

ಮೊಸಳೆ ರಸ್ತೆ ದಾಟಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಪರಿಹಾರ ವಿಳಂಬವಾಗಿದ್ದು ಬೀಳುವ ಸ್ಥಿತಿಯಲ್ಲಿ ಇರುವ ಮನೆಗಳಲ್ಲೆ ಸಂತ್ರಸ್ತರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ.


ಕೃಷ್ಣಾ ನದಿಯಲ್ಲಿ  ನೀರಿನ ಇಳಿಮುಖವಾಗಿದ್ದರೂ ಕೂಡ ಆಗಾಗ ಕಾಣಿಸಿಕೊಳ್ಳುತ್ತಿರುವ ವಿಷ ಜಂತುಗಳು ಮತ್ತು ಬೃಹದಾಕಾರದ ಮೊಸಳೆಗಳಿಂದಾಗಿ ಪ್ರವಾಹ ಸಂತ್ರಸ್ತರು ರಾತ್ರಿ ನಿದ್ದೆ ಇಲ್ಲದೆ ದಿನ ಕಳೆಯುವಂತಾಗಿದೆ. ಸರಕಾರ ತಕ್ಷಣ ಎಚ್ಚೆತ್ತುಕೊಳ್ಳುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು