12:53 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ ಪ್ರದಾನ

15/10/2021, 19:05

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ಪುರಾಣ ಪ್ರವಚನಕಾರ ಹಾಗೂ ರಂಗಕಲಾವಿದ ಅಗಸಗಟ್ಟೆ ತಿಂದಪ್ಪ ಅವರಿಗೆ ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್  ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. 

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವತಿಯಿಂದ ಜರುಗಿದ ಕಾರ್ಯಕ್ರಮದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ವಿವಿಧ ಜಿಲ್ಲೆಗಳ ಗಣ್ಯಮಾನ್ಯರನ್ನು ಗುರುತಿಸಿ ಸನ್ಮಾನಿಸಿದೆ. ಟ್ರಸ್ಟ್‌ ವತಿಯಿಂದ ಗಣ್ಯಮಾನ್ಯರನ್ನು  ಕಾರ್ಯಕ್ರಮಕ್ಕೆ ಬರಮಾಡಿಕೊಂಡು,ಅವರನ್ನ ಸತ್ಕರಿಸಿ ಗೌರವ ಪೂರ್ವಕವಾಗಿ ಅಭಿನಂದಿಸಿದೆ. ತಿಂದಪ್ಪರ ಕಲಾ ಸೇವೆಯನ್ನು ಪರಿಗಣಿಸಿ ಅವರಿಗೆ ರಾಜ್ಯಮಟ್ಟದ “ಕರುನಾಡ  ಹರಿಕಾರಶ್ರೀ” ಪ್ರಶಸ್ತಿ ಗೌರವಿಸಿದೆ. ಅಕ್ಟೋಬರ್ 9ರಂದು ಮಂಡ್ಯದಲ್ಲಿ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ನೀಡಲಾಯಿತು.

ಅಭಿನಂದನೆ: ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಹಿರಿಯ ರಂಗಕಲಾವಿದರು. ವಿವಿಧ ಸಮುದಾಯಗಳ ಮುಖಂಡರು, ವಿವಿಧ ಪಕ್ಷಗಳ ಪ್ರಮುಖರು, ವಿವಿದ  ಕಲಾವಿದರ ಸಂಘಟನೆಗಳ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಗೂ ಜನಪ್ರತಿನಿಧಿಗಳು ಪ್ರಶಸ್ತಿ ಪಡೆದ ಯುವ ರಂಗಕಲಾವಿದ ಅಗಸಗಟ್ಟೆ ತಿಂದಪ್ಪರವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು