5:31 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು