11:58 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು