8:38 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತೇಲುತ್ತಿದ್ದರೆ, ಇತ್ತ ನಡೆದೇ ಬಿಟ್ಟಿತು ಗೆಳೆಯನ ಹತ್ಯೆ: ಯಾಕಾಗಿ ನಡೆಯಿತು ಈ ಕೊಲೆ?

16/10/2021, 09:36

ಮಂಗಳೂರು(reporterkarnataka.com): ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತಲ್ಲೀಣವಾಗಿದ್ದರೆ, ಇತ್ತ ನಗರದ ಒಂದು ಮೂಲೆಯಲ್ಲಿ ಯುವಕನೊಬ್ಬನ ಹತ್ಯೆ ತಣ್ಣಗೆ ನಡೆದೇ ಬಿಟ್ಟಿದೆ. ಗೆಳೆಯನೇ ಈ ಕೊಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

6 ಮಂದಿ ಗೆಳೆಯರ ತಂಡ ದಸರಾ ನಿಮಿತ್ತ ಪಾರ್ಟಿ ಮಾಡಲು ಸೇರಿದ್ದರು. ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಅವರು ಒಟ್ಟು ಸೇರಿದ್ದರು. ಪ್ರಮೀತ್, ಜೇಸನ್,  ಕಾರ್ತಿಕ್, ಧನಿಷ್ ,ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ದಸರಾ ಪ್ರಯುಕ್ತ ಪಾರ್ಟಿ ಮಾಡಲು ಒಟ್ಟು ಸೇರಿದ್ದರು. ತಡರಾತ್ರಿ ವೇಳೆ ಜೇಸನ್ ಮತ್ತು ಧನುಷ್ ಪಚ್ಚನಾಡಿ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಜೇಸನ್ ಚೂರಿಯಿಂದ ಧನುಷ್ ಗೆ ಇರಿದೇ ಬಿಟ್ಟ.  ತೀವ್ರವಾಗಿ  ಗಾಯಗೊಂಡ ಧನುಷ್ ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿತಾಗದೆ ಆತ ಮೃತಪಟ್ಟಿದ್ದಾನೆ.  ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು