6:14 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತೇಲುತ್ತಿದ್ದರೆ, ಇತ್ತ ನಡೆದೇ ಬಿಟ್ಟಿತು ಗೆಳೆಯನ ಹತ್ಯೆ: ಯಾಕಾಗಿ ನಡೆಯಿತು ಈ ಕೊಲೆ?

16/10/2021, 09:36

ಮಂಗಳೂರು(reporterkarnataka.com): ಇಡೀ ಮಂಗಳೂರು ದಸರಾ ಸಂಭ್ರಮದಲ್ಲಿ ತಲ್ಲೀಣವಾಗಿದ್ದರೆ, ಇತ್ತ ನಗರದ ಒಂದು ಮೂಲೆಯಲ್ಲಿ ಯುವಕನೊಬ್ಬನ ಹತ್ಯೆ ತಣ್ಣಗೆ ನಡೆದೇ ಬಿಟ್ಟಿದೆ. ಗೆಳೆಯನೇ ಈ ಕೊಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

6 ಮಂದಿ ಗೆಳೆಯರ ತಂಡ ದಸರಾ ನಿಮಿತ್ತ ಪಾರ್ಟಿ ಮಾಡಲು ಸೇರಿದ್ದರು. ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಅವರು ಒಟ್ಟು ಸೇರಿದ್ದರು. ಪ್ರಮೀತ್, ಜೇಸನ್,  ಕಾರ್ತಿಕ್, ಧನಿಷ್ ,ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ದಸರಾ ಪ್ರಯುಕ್ತ ಪಾರ್ಟಿ ಮಾಡಲು ಒಟ್ಟು ಸೇರಿದ್ದರು. ತಡರಾತ್ರಿ ವೇಳೆ ಜೇಸನ್ ಮತ್ತು ಧನುಷ್ ಪಚ್ಚನಾಡಿ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಜೇಸನ್ ಚೂರಿಯಿಂದ ಧನುಷ್ ಗೆ ಇರಿದೇ ಬಿಟ್ಟ.  ತೀವ್ರವಾಗಿ  ಗಾಯಗೊಂಡ ಧನುಷ್ ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿತಾಗದೆ ಆತ ಮೃತಪಟ್ಟಿದ್ದಾನೆ.  ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು