7:27 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ

27/05/2021, 18:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, 

ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬೆಂಗಳೂರಿನ ಚಲನಚಿತ್ರ ನಟ, ನಿರ್ದೇಶಕ ಡಿಂಗ್ರೀ ನರೇಶ್ ಮೆಚ್ಚುಗೆ ಪಡಿಸಿದ್ದಾರೆ.

ಸರಕಾರ ಮಾಡಲಾರದಂಥ ಕೆಲಸವನ್ನು ಒಬ್ಬ ಮಹಿಳಾ ಸಮಾಜ ಸೇವಕಿ ಮಾಡುತ್ತಿದ್ದಾರೆ. ಬಡ ಬಗ್ಗರಿಗೆ, ಕೂಲಿ ಕಾರ್ಮಿಕರಿಗೆ ಸ್ಪಂದಿಸುವುದು ಒಂದು ಉತ್ತಮವಾದ ಜನರ ಸೇವೆ. ಅವರು ನಿಮ್ಮನ್ನು ಎಂದಿಗೂ ಮರೆಯುವುದಿಲ್ಲ. ಇಂಥ ಸಮಾಜಸೇವೆ ಮಾಡುವ ನಿಮ್ಮನ್ನು ದಿನಾ ಸ್ಮರಿಸುವ ಕಾಲ ಬರುತ್ತದೆ ಎಂದು ಹೇಳಿದ್ದಾರೆ.

 ಶ್ರೀದೇವಿ ನಾಯಕ್ ಅವರು ಬಾಲ್ಯದಿಂದಲೂ ಸಮಾಜಸೇವೆ ಮಾಡುತ್ತಾ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ವೆಂಕಟೇಶ್ ನಾಯಕ್ ಫೌಂಡೇಶನ್ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಆಸರೆಯಾಗಿದ್ದಾರೆ. ಅವರ ಸೇವೆ ಸಮಾಜಕ್ಕೆ ಅದ್ಭುತವಾದ ಕೊಡುಗೆ ಎಂದು ಚಲನಚಿತ್ರ ನಟ ಡಿಂಗ್ರೀ ನರೇಶ್ ಹೊಗಳಿದ್ದಾರೆ.

ಡಿಂಗ್ರೀ ನರೇಶ್ ಅವರು ರಾಯಚೂರಿನ ಆಶಾಪುರ್ ಗ್ರಾಮದವರು. ಬೆಂಗಳೂರಿನಲ್ಲಿ ಅವರು ಮಾಡಿದ ಚಲನಚಿತ್ರಗಳು ಕೇರಾಫ್ ಪುಟ್ಟಣ್ಣ ಪಾರ್ಟ್ ಟು, ಪುಟ್ಟರಾಜ್ ಲವರ್ ಶಶಿಕಲಾ, ಬೆಲ್ ಬಟನ್, ಪೂರ್ಣ ಸತ್ಯ , ದೇವಗಿರಿ ರಹಸ್ಯ, ಭಜರಂಗಿ 2,

ಅವಳು ಲೈಫ್ ಸತ್ಯ ಸೇರಿದಂತೆ ಹಲವರು ಚಲನಚಿತ್ರಗಳ ನಟಿಸಿ, ನಿರ್ದೇಶಕ ನೀಡಿದ್ದಾರೆ. ಜನಬಲ ಪತ್ರಿಕೆಯ ಸಂಪಾದಕ ಅಂಬಣ್ಣ,   ಚಿಕ್ಕಂದಿನಿಂದಲೇ ಡಿಂಗ್ರೀ ನರೇಶ್ ಅವರು ಹೋರಾಟ ಮಾಡುವುದರ ಮುಖಾಂತರ ಸಮಾಜದ ಒಳ್ಳೆಯ ಹೆಸರು ಮಾಡಿದ್ದಾರೆ. ಅಲ್ಲದೆ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರ ಆತ್ಮೀಯ ಸ್ನೇಹಿತರು. ನಮ್ಮ ಭಾಗದ ಸಮಾಜ ಸೇವೆ ಮಾಡುವ ಶ್ರೀದೇವಿ ನಾಯಕ್ ಅವರ ಸೇವೆಯನ್ನು ಗುರುತಿಸಿ ಚಲನಚಿತ್ರ ನಟರು ಅವರಿಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು