2:06 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು?

16/10/2021, 18:26

ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್​ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಎಂಬಿಬ್ಬರು ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. 

ನಿನ್ನೆ ರಾತ್ರಿ ಇವರಿಬ್ಬರು ದಸರಾ ಕಾರ್ಯಕ್ರಮ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.

ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಹೆಲ್ಮೆಟ್ ಧರಿಸದೇ ಇರುವುದರಿಂದ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಂಬಳೆ ಕಡೆಗೆ ತೆರಳುವ ಸಂದರ್ಭ ಕಾರೊಂದು ಬೈಕ್​ಗೆ ಸ್ವಲ್ಪ ತಾಗಿದ್ದು, ಇದರಿಂದ ಗಾಬರಿಗೊಂಡ ಪರಿಣಾಮ ಕೆ.ಸಿ. ರೋಡ್ ಸೇತುವೆಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ಬೈಕ್ ಸ್ಕಿಡ್​ ಆಗಿದ್ದಾ? ಅಥವಾ ಕಾರು ಡಿಕ್ಕಿ ಹೊಡೆದಿದೆಯೋ ? ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು