6:51 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕಲೆ, ಸಂಸ್ಕೃತಿ ಬೆಳೆದರೆ ಮಾತ್ರ ನಾಡಿನ ಅಭಿವೃದ್ಧಿ; ಬರೇ ಕಟ್ಟಡ, ರಸ್ತೆಯಿಂದ ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್

17/10/2021, 11:01

ಕಾರ್ಕಳ(reporterkarnataka.com): ಪುಸ್ತಕ ಓದುವ ಹವ್ಯಾಸ ಕಡಿಮೆಯಾದರೂ, ಇದೀಗ ಮೊಬೈಲ್ ಮೂಲಕವೂ ಸಾಹಿತ್ಯವನ್ನು ಓದುವವರಿದ್ದಾರೆ. ಹೀಗಾಗಿ ಓದುವ ಸಂಸ್ಕೃತಿ ಜೀವಂತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.               

ಇಲ್ಲಿನ ಹೊಟೇಲ್ ಪ್ರಕಾಶ್‌ನ ಉತ್ಸವ ಸಭಾಂಗಣದಲ್ಲಿ ದಿ. ಪ್ರೊ.ಎಂ ರಾಮಚಂದ್ರ ವೇದಿಕೆಯಲ್ಲಿ ಸಾಹಿತ್ಯ ಸಂಘದ ಬೆಳ್ಳಿಹಬ್ಬ ವರ್ಷಾಚರಣೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ರಾಜ್ಯದ ಊರಿನ ಅಭಿವೃದ್ಧಿ ಅಂದರೆ ಅಲ್ಲಿನ ಕಟ್ಟಡ, ರಸ್ತೆ, ಸೇತುವೆ ಮಾತ್ರವಲ್ಲ. ಅಲ್ಲಿ ಕಲೆ, ಸಂಸ್ಕೃತಿ ಬೆಳೆಸುವ ಕೆಲಸ ನಡೆಯಬೇಕು. ಈ ದೃಷ್ಟಿಯಲ್ಲಿ ಸಾಹಿತ್ಯ ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು ನೀಡಿದ ಕೊಡುಗೆ ಅನನ್ಯವಾದುದು ಎಂದರು. 

ಯುವ ಸಾಹಿತಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಅಭಿರುಚಿ ಹೆಚ್ಚಿಸಲು ಹಾಗೂ ಜನರ ನಡುವೆ ಸಾಹಿತ್ಯವನ್ನು ಕೊಂಡೊಯ್ಯಲಾಗುವುದು ಎಂದ ಅವರು

ಭವಿಷ್ಯದ ದಿನಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಒಂದು ಸೀಮಿತ ಪ್ರದೇಶಕ್ಕೆ ಸೀಮಿತಗೊಳಿಸದೆ ಜನರ ನಡುವೆ ಕೊಂಡೊಯ್ಯುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಲಿದೆ. ಕಾರ್ಕಳ ಸಾಹಿತ್ಯ ಸಂಘದ ಪ್ರೇರಣೆ ಮತ್ತು ಮಾದರಿಯನ್ನು ಅನುಸರಿಸಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದರು. 

ರಾಜ್ಯೋತ್ಸವ ಪ್ರಶಸ್ತಿ ಬಯಸಿ ಈ ಬಾರಿ 28ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ. ಅವುಗಳಲ್ಲಿ 66 ಅರ್ಜಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಂತಿಮ ಆಯ್ಕೆ ದೊಡ್ಡ ಸವಾಲಾಗಿದೆ ಎಂದರು.

ಮಂಗಳೂರು ಶ್ರೀ ರಾಮಕೃಷ್ಷ ಮಠದ ಸ್ವಾಮಿ ಜಿತಕಾಮಾನಂದಜೀ ಅಶಿರ್ವಚನ ನೀಡಿ ಸಮಾಜ ಬದಲಾವಣೆಯಲ್ಲಿ ಸಾಹಿತ್ಯ ಕೊಡುಗೆ ಇದೆ. ಸಾಹಿತ್ಯ ಎಂದರೆ ಆಧ್ಯಾತ್ಮವೇ ಆಗಿದೆ ಎಂದರು.  ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಸನ್ಮಾನಿಸಲಾಯಿತು.  

ಮುಂಬೈ ವಿವಿಯ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿ ಸಮಿತಿ ಅಧ್ಯಕ್ಷ ಡಾ. ಮೊಹನ್ ಆಳ್ವ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಕೆ.ಪಿ.ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು