12:51 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಲೆ, ಸಂಸ್ಕೃತಿ ಬೆಳೆದರೆ ಮಾತ್ರ ನಾಡಿನ ಅಭಿವೃದ್ಧಿ; ಬರೇ ಕಟ್ಟಡ, ರಸ್ತೆಯಿಂದ ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್

17/10/2021, 11:01

ಕಾರ್ಕಳ(reporterkarnataka.com): ಪುಸ್ತಕ ಓದುವ ಹವ್ಯಾಸ ಕಡಿಮೆಯಾದರೂ, ಇದೀಗ ಮೊಬೈಲ್ ಮೂಲಕವೂ ಸಾಹಿತ್ಯವನ್ನು ಓದುವವರಿದ್ದಾರೆ. ಹೀಗಾಗಿ ಓದುವ ಸಂಸ್ಕೃತಿ ಜೀವಂತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.               

ಇಲ್ಲಿನ ಹೊಟೇಲ್ ಪ್ರಕಾಶ್‌ನ ಉತ್ಸವ ಸಭಾಂಗಣದಲ್ಲಿ ದಿ. ಪ್ರೊ.ಎಂ ರಾಮಚಂದ್ರ ವೇದಿಕೆಯಲ್ಲಿ ಸಾಹಿತ್ಯ ಸಂಘದ ಬೆಳ್ಳಿಹಬ್ಬ ವರ್ಷಾಚರಣೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ರಾಜ್ಯದ ಊರಿನ ಅಭಿವೃದ್ಧಿ ಅಂದರೆ ಅಲ್ಲಿನ ಕಟ್ಟಡ, ರಸ್ತೆ, ಸೇತುವೆ ಮಾತ್ರವಲ್ಲ. ಅಲ್ಲಿ ಕಲೆ, ಸಂಸ್ಕೃತಿ ಬೆಳೆಸುವ ಕೆಲಸ ನಡೆಯಬೇಕು. ಈ ದೃಷ್ಟಿಯಲ್ಲಿ ಸಾಹಿತ್ಯ ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು ನೀಡಿದ ಕೊಡುಗೆ ಅನನ್ಯವಾದುದು ಎಂದರು. 

ಯುವ ಸಾಹಿತಿಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಅಭಿರುಚಿ ಹೆಚ್ಚಿಸಲು ಹಾಗೂ ಜನರ ನಡುವೆ ಸಾಹಿತ್ಯವನ್ನು ಕೊಂಡೊಯ್ಯಲಾಗುವುದು ಎಂದ ಅವರು

ಭವಿಷ್ಯದ ದಿನಗಳಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿ ಒಂದು ಸೀಮಿತ ಪ್ರದೇಶಕ್ಕೆ ಸೀಮಿತಗೊಳಿಸದೆ ಜನರ ನಡುವೆ ಕೊಂಡೊಯ್ಯುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಲಿದೆ. ಕಾರ್ಕಳ ಸಾಹಿತ್ಯ ಸಂಘದ ಪ್ರೇರಣೆ ಮತ್ತು ಮಾದರಿಯನ್ನು ಅನುಸರಿಸಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದರು. 

ರಾಜ್ಯೋತ್ಸವ ಪ್ರಶಸ್ತಿ ಬಯಸಿ ಈ ಬಾರಿ 28ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ. ಅವುಗಳಲ್ಲಿ 66 ಅರ್ಜಿಗಳನ್ನು ಆಯ್ಕೆ ಮಾಡಬೇಕಾಗಿದೆ. ಅಂತಿಮ ಆಯ್ಕೆ ದೊಡ್ಡ ಸವಾಲಾಗಿದೆ ಎಂದರು.

ಮಂಗಳೂರು ಶ್ರೀ ರಾಮಕೃಷ್ಷ ಮಠದ ಸ್ವಾಮಿ ಜಿತಕಾಮಾನಂದಜೀ ಅಶಿರ್ವಚನ ನೀಡಿ ಸಮಾಜ ಬದಲಾವಣೆಯಲ್ಲಿ ಸಾಹಿತ್ಯ ಕೊಡುಗೆ ಇದೆ. ಸಾಹಿತ್ಯ ಎಂದರೆ ಆಧ್ಯಾತ್ಮವೇ ಆಗಿದೆ ಎಂದರು.  ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಸನ್ಮಾನಿಸಲಾಯಿತು.  

ಮುಂಬೈ ವಿವಿಯ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿ ಸಮಿತಿ ಅಧ್ಯಕ್ಷ ಡಾ. ಮೊಹನ್ ಆಳ್ವ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಕೆ.ಪಿ.ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು