4:53 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು