3:07 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು