11:52 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು

17/10/2021, 11:10

ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ.

ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು  ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಪಳ್ಳಿಯ ಅಶೋಕ್ ನಾಯಕ್ ಅವರು ದೇಶಿ ತಳಿಯ ಗೋವನ್ನು ಸಾಕುತ್ತಿದ್ದು, ಎಂದಿನಂತೆ ದನವನ್ನು ಹಟ್ಟಿಯಿಂದ ಮೇಯಲು ಬಿಟ್ಟಿದ್ದು, ರಾತ್ರಯಾದರೂ ದನವು ಎಂದಿನಂತೆ ಮನೆಗೆ ವಾಪಾಸು ಬಂದಿಲ್ಲ.  ರಾತ್ರಿ ಹಟ್ಟಿಗೆ ಬಾರದೇ ಇದ್ದುದರಿಂದ ಅಶೋಕ್ ನಾಯಕ್ ಹಾಗೂ ಅವರ ಗೆಳೆಯರು  ಪಳ್ಳಿ ಪೇಟೆಯಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಾಡಿದ್ದಾರೆ ಸಿಗಲಿಲ್ಲ.

ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆಯಿದ್ದು, 15 ರಂದು 2:00 ಗಂಟೆಯ ಸಮಯ ಒಂದು ರಿಟ್ಜ್  ಕಾರು ಪಳ್ಳಿ ಪೆಟ್ರೋಲ್ ಪಂಪ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಸ್ವಲ್ಪ ಸಮಯ ನಿಂತಿದ್ದು ಬಳಿಕ ಕಾರು ಉಡುಪಿ ಕಡೆಗೆ ತೆರಳಿರುವ ದೃಶ್ಯಾವಳಿಗಳು  ಪೆಟ್ರೋಲ್ ಪಂಪ್‌ನ ಸಿಸಿ ಟಿವಿ ಕ್ಯಾಮೇರಾದಲ್ಲಿ  ಸೆರೆಯಾಗಿರುವುದನ್ನು ಅಶೋಕ ನಾಯಕ್  ಹಾಗೂ ಗೆಳೆಯ ರಾಜೇಶ್ ಆಚಾರ್ಯರವರು ನೋಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು