10:36 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು ದಾಖಲು

17/10/2021, 20:30

ಉಡುಪಿ(reporterkarnataka.com): ಪೂರ್ವಾನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ ಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೋವಿಡ್ ನೋಡೆಲ್ ಅಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದಾರೆ. ಅದರಂತೆ ಹಿಂ.ಜಾ.ವೇದಿಕೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆ್ಯಕ್ಟ್ 2020ರಂತೆ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು