9:15 AM Wednesday20 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು ದಾಖಲು

17/10/2021, 20:30

ಉಡುಪಿ(reporterkarnataka.com): ಪೂರ್ವಾನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ ಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೋವಿಡ್ ನೋಡೆಲ್ ಅಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದಾರೆ. ಅದರಂತೆ ಹಿಂ.ಜಾ.ವೇದಿಕೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆ್ಯಕ್ಟ್ 2020ರಂತೆ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು