12:04 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶಾಲೆ ಗಂಟೆ ಬಾರಿಸಲು ಮುಹೂರ್ತ ಫಿಕ್ಸ್: 1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್ 25ರಿಂದ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ

18/10/2021, 20:21

ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಈ ಹಿಂದೆಯೇ ಹೇಳಿತ್ತು. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್  25ರಂದು ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ.

ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಿದ್ದು, ಅಕ್ಟೋಬರ್ 20ಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ. ಹೀಗಾಗಿ ಶಿಕ್ಷಣ ತಜ್ಞರು, ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಆರೋಗ್ಯ, ಶಿಕ್ಷಣ, ವೈದ್ಯಕೀಯ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 1ರಿಂದ 5ನೇ ತರಗತಿಗಳನ್ನು ಆರಂಭಿಸುವ ಕುರಿತು ಕೊರೊನಾ ತಾಂತ್ರಿಕ ಸಮಿತಿ ಸಲಹೆ ಮಾಡಿದೆ.

1ರಿಂದ 5ನೇ ತರಗತಿ ವರೆಗೆ ಅಕ್ಟೋಬರ್  25ರಿಂದ ಆರಂಭವಾಗಲಿದೆ. ಆದರೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಒಪ್ಪಿಗೆ ಕಡ್ಡಾಯವಾಗಿದೆ. ಹಾಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ತರಗತಿಗೂ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು