4:42 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್  420 ಎಂದು ರೇಣುಕಾಚಾರ್ಯ !!

27/05/2021, 19:10

ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಯೋಗೀಶ್ವರ್ ಅವರನ್ನು ಏಕವಚನದಲ್ಲಿ ನಿಂದಿಸಿ 420 ಎಂದು ಜರೆದಿದ್ದಾರೆ

ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ. ಅವನಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಹೀಗೆಲ್ಲ

ಬ್ಲಾಕ್ ಮೇಲ್ ಮಾಡಲು ಬಂದರೆ ನಾವು ಸುಮ್ಮನಿರಲ್ಲ. ಇಂಥವರಿಂದಲೇ ಪಕ್ಷಕ್ಕೆ ಧಕ್ಕೆಯಾಗುತ್ತದೆ. ಯಡಿಯೂರಪ್ಪನವರು ಆತನನ್ನು

ಸಚಿವನನ್ನಾಗಿ ಮಾಡಿದ್ದೇ ದೊಡ್ಡ ತಪ್ಪು ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಬಿಜೆಪಿ ಮೂರು ಭಾಗವಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಹೇಳಲು ಯೋಗೇಶ್ವರ್‌ಗೆ ಯಾವ ನೈತಿಕತೆಯೂ ಇಲ್ಲ. ಮೆಗಾಸಿಟಿ ಹಗರಣದಲ್ಲಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಗೃಹಸಚಿವ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.  ಮಂತ್ರಿ ಮಂಡಲದಿಂದ ವಜಾ ಮಾಡಲು ಕೂಡ ಆಗ್ರಹಿಸಿದರು.

ಯೋಗೇಶ್ವರ್ ಹಿಂಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾನೆ. 

ಕೊರೊನಾದಿಂದ ಜನರು ನೊಂದು, ಬೆಂದು ಹೋಗಿದ್ದಾರೆ. ಈ ಸಮಯದಲ್ಲಿ ದೆಹಲಿಗೇಕೆ ಹೋಗಬೇಕಿತ್ತು. ಯೋಗೇಶ್ವರ್ ದೆಹಲಿಯಲ್ಲಿ ಯಾವ ನಾಯಕ ರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಪೋಟೋ ತೆಗೆಸಿಕೊಂಡಿದ್ದಾನೆ. ಒಣ ರಾಜಕೀಯ ಬಿಟ್ಟು ಕ್ಷೇತ್ರದಲ್ಲಿ ಸಂಚರಿಸಿ ಕರೊನಾ ಜಾಗೃತಿ ಮಾಡಲಿ ಎಂದು ತಾಕೀತು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು