11:44 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್  420 ಎಂದು ರೇಣುಕಾಚಾರ್ಯ !!

27/05/2021, 19:10

ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಯೋಗೀಶ್ವರ್ ಅವರನ್ನು ಏಕವಚನದಲ್ಲಿ ನಿಂದಿಸಿ 420 ಎಂದು ಜರೆದಿದ್ದಾರೆ

ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ. ಅವನಿಗೆ ಲೂಟಿ ಮಾಡುವ ಖಾತೆ ಬೇಕಂತೆ. ಹೀಗೆಲ್ಲ

ಬ್ಲಾಕ್ ಮೇಲ್ ಮಾಡಲು ಬಂದರೆ ನಾವು ಸುಮ್ಮನಿರಲ್ಲ. ಇಂಥವರಿಂದಲೇ ಪಕ್ಷಕ್ಕೆ ಧಕ್ಕೆಯಾಗುತ್ತದೆ. ಯಡಿಯೂರಪ್ಪನವರು ಆತನನ್ನು

ಸಚಿವನನ್ನಾಗಿ ಮಾಡಿದ್ದೇ ದೊಡ್ಡ ತಪ್ಪು ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಬಿಜೆಪಿ ಮೂರು ಭಾಗವಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಹೇಳಲು ಯೋಗೇಶ್ವರ್‌ಗೆ ಯಾವ ನೈತಿಕತೆಯೂ ಇಲ್ಲ. ಮೆಗಾಸಿಟಿ ಹಗರಣದಲ್ಲಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಗೃಹಸಚಿವ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದರು.  ಮಂತ್ರಿ ಮಂಡಲದಿಂದ ವಜಾ ಮಾಡಲು ಕೂಡ ಆಗ್ರಹಿಸಿದರು.

ಯೋಗೇಶ್ವರ್ ಹಿಂಬಾಗಿಲಿನಿಂದ ವಿಧಾನಸೌಧ ಪ್ರವೇಶಿಸಿ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾನೆ. 

ಕೊರೊನಾದಿಂದ ಜನರು ನೊಂದು, ಬೆಂದು ಹೋಗಿದ್ದಾರೆ. ಈ ಸಮಯದಲ್ಲಿ ದೆಹಲಿಗೇಕೆ ಹೋಗಬೇಕಿತ್ತು. ಯೋಗೇಶ್ವರ್ ದೆಹಲಿಯಲ್ಲಿ ಯಾವ ನಾಯಕ ರನ್ನು ಭೇಟಿ ಮಾಡಿಲ್ಲ. ಅವರ ಗೇಟು ಮುಟ್ಟಿ ಬಂದು ಪೋಟೋ ತೆಗೆಸಿಕೊಂಡಿದ್ದಾನೆ. ಒಣ ರಾಜಕೀಯ ಬಿಟ್ಟು ಕ್ಷೇತ್ರದಲ್ಲಿ ಸಂಚರಿಸಿ ಕರೊನಾ ಜಾಗೃತಿ ಮಾಡಲಿ ಎಂದು ತಾಕೀತು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು