12:15 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಸ್ಕಿ: ದಲಿತ ಸಂಘಟನೆಗಳಿಂದ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

18/10/2021, 21:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಮಾಡುವಂತೆ ಮಸ್ಕಿಯ ದಲಿತ ಸಂಘಟನೆಗಳು ಚಲವಾದಿ ಮಹಾಸಭಾ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.

ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನೆ ಮುಖ್ಯರಸ್ತೆಗಳ ಮೂಲಕ ಸಂಚಾರಿಸಿತು. ಸ್ವಲ್ಪ ಸಮಯ ಸಂಚಾರ ಬಂದ್ ಮಾಡಲಾಯಿತು. ಪ್ರಮುಖ ಮುಖ್ಯ ರಸ್ತೆಗಳಲ್ಲಿ ದೈವದ ಕಟ್ಟೆ, ಕನಕ ವೃತ್ತ, ವಾಲ್ಮೀಕಿ ವೃತ್ತ, ಚೆನ್ನಮ್ಮ ವೃತ್ತ, ಅಶೋಕ್ ಸರ್ಕಲ್ ಸೇರಿದಂತೆ ಅಂಬೇಡ್ಕರ್ ಪ್ರತಿಮೆ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. 

ಮಸ್ಕಿ ಕ್ಷೇತ್ರದ ಎಲ್ಲ ಸಂಘಟನಾಕಾರರು 2000ಕ್ಕೂ ಹೆಚ್ಚು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದಲಿತ ಮಹಾಸಭಾದ ಮುಖಂಡರಾದ ದಲಿತ ಸಾಹಿತಿ ಕವಿ ಚಿಂತಕ ಸಿ. ದಾನಪ್ಪ ನಿಲಗಲ್ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ, ಸದಾಶಿವ ಆಯೋಗವು ಜಾರಿ ಮಾಡುವಂತೆ ಆಗ್ರಹಿಸಿ ಸರಕಾರವು ಸದಾಶಿವ ಆಯೋಗ ಜಾರಿಮಾಡಬೇಕು. ಮಸ್ಕಿ ಶಾಸಕರಾದ ಬಸನಗೌಡ ತುರ್ವಿಹಾಳ ಅವರಿಗೆ ಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದ್ದು, ಸುಮಾರು 38 ಸಾವಿರ ಮತಗಳಿಂದ ಜಯಗಳಿಸಿ ಮಸ್ಕಿ ಶಾಸಕರು ಸದನದಲ್ಲಿ ಸದಾಶಿವ ಆಯೋಗದ ಬಗ್ಗೆ ಧ್ವನಿಯೆತ್ತಬೇಕು. ಜಾತಿಯಲ್ಲಿ ಸರಕಾರ ಪ್ರಣಾಳಿಕೆಯನ್ನು ತಳ್ಳಿ ಹಾಕುವುದರ ಮೂಲಕ ತಿರಸ್ಕರಿಸಿ ಮುಂದಿನ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ದಲಿತ ಯುವ ಮುಖಂಡ ತಮ್ಮ ಆಕ್ರೋಶವನ್ನು ವೇದಿಕೆ ಮೂಲಕ ಹೊರಹಾಕಿದರು. ಚೆಲುವಾದಿ ಮಹಾಸಭಾ ಮುಖಂಡ ಮಲ್ಲಪ್ಪ ಗೋನಾಳ್ ಮಾತನಾಡಿ, ಸರಕಾರ ಸದಾಶಿವ ಆಯೋಗ ವನ್ನು ಜಾರಿಗೊಳಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಎಲ್ಲಾ ಸಂಘಟನೆಯ ಮುಖಂಡ ಮಹಿಳಾ ಸ್ತ್ರೀಶಕ್ತಿ ಮುಖಂಡರು ಜೈ ಘೋಷಗಳನ್ನು ಹೋಗುವ ಮೂಲಕ ಸರಕಾರ ಸದಾಶಿವ ಆಯೋಗದ ಬಗ್ಗೆ ಎಚ್ಚರಿಕೆ ಮೂಡಿಸಿದರು. ನಂತರ ಮನವಿ ಪತ್ರ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಮಸ್ಕಿ ಕ್ಷೇತ್ರದ 2000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ದಲಿತ ಮಹಾ ಸಭಾ ಮುಖಂಡರಾದ ಸಿ. ದಾನಪ್ಪ ನೀಲಗಲ್, ಮಲ್ಲಯ್ಯ ಬಳ್ಳ, ಹನುಮಂತಪ್ಪ ವೆಂಕಟಾಪುರ್, ಸುರೇಶ್ ಅಂತರಗಂಗೆ, ಮಲ್ಲಯ್ಯ ಮುರಾರಿ, ಮಲ್ಲಪ್ಪ ಗೋನಾಳ್, ನಾಗಲಿಂಗ ತೀರ್ಥಭಾವಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು